“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.
“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.
ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.
ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ!
“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.
ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.
“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.