Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:24 - ಪರಿಶುದ್ದ ಬೈಬಲ್‌

24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್, ಝುಟಿ ಮಾನ್ಸಾ ಯೆವ್ನ್ ಅಪ್ನಿಚ್ ಕ್ರಿಸ್ತ್ ನಾಹೊಲ್ಯಾರ್ ಪ್ರವಾದಿ ಮನುನ್ ಸಾಂಗ್ತ್ಯಾತ್ ಅನಿ ಅಪ್ನಾಚ್ಯಾನ್ ಸಾದ್ಯ್ ಹೊಲ್ಯಾರ್ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಕ್ನಿ ಸೈತ್ ಮೊಟಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವುಕ್ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:24
31 ತಿಳಿವುಗಳ ಹೋಲಿಕೆ  

ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.


ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.


ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.


“ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


“ಹೌದು, ಆಹ್ವಾನಿಸಲ್ಪಟ್ಟವರು ಅನೇಕರಾದರೂ ಆರಿಸಲ್ಪಟ್ಟವರು ಕೆಲವರು ಮಾತ್ರ.”


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು