Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:39 - ಪರಿಶುದ್ದ ಬೈಬಲ್‌

39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅಶೆ ಸಗ್ಳ್ಯಾ ಜಿಮ್ನಿರ್ ಪಾನಿಭರುನ್ ಸಗ್ಳೆ ಹೊವ್ನ್ ಜಾಯ್ ಪತರ್‍ಬಿ ತೆಂಕಾ ಕಾಯ್ಬಿ ಕಳುಕ್ ನಾ. ತಸೆಚ್ ಮಾನ್ಸಾಚೊ ಲೆಕ್ ಯೆತಲ್ಯಾ ಎಳಾರ್‍ಬಿ ಘಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:39
18 ತಿಳಿವುಗಳ ಹೋಲಿಕೆ  

ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


“ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ.


‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’”


ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.


ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


“ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.


ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.


ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು