Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:43 - ಪರಿಶುದ್ದ ಬೈಬಲ್‌

43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಯಾದ್ ಥವ್ನ್ ಘೆವಾ, ಹ್ಯಾಚ್ ಎಳಾರ್ ಚೊರ್ ಯೆತಾ ಮನುನ್ ಘರಾಚ್ಯಾ ಮಾಲ್ಕಾಕ್ ಗೊತ್ತ್ ರ್‍ಹಾಲ್ಯಾರ್ ತೊ ಜಾಗೊ ರ್‍ಹಾವ್ನ್ ರಾಕುನ್ಗೆತ್ ರ್‍ಹಾತಾ ಅನಿ ಕನ್ನಾಬಿ ಅಪ್ನಾಚೆ ಘರ್ ಫೊಡುನ್ ಚೊರುನ್ ಘೆವ್ನ್ ಜಾವ್ಕ್ ದಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:43
18 ತಿಳಿವುಗಳ ಹೋಲಿಕೆ  

“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಅವರು ತಮ್ಮ ಬೆಳ್ಳಿನಾಣ್ಯವನ್ನು ತೆಗೆದುಕೊಂಡಾಗ ತೋಟದ ಯಜಮಾನನ ಬಗ್ಗೆ ಗೊಣಗುಟ್ಟುತ್ತಾ,


ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ.


ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.


“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.


ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.


ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು