Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:10 - ಪರಿಶುದ್ದ ಬೈಬಲ್‌

10 “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚೆಸಾಟ್ನಿ ಬುದ್ದ್ ನಸಲ್ಲ್ಯಾ ಪಾಂಚ್ ಧೆಡ್ನಿಯಾ ಇಕ್ತಲ್ಯಾಂಚ್ಯಾಕ್ನಾ ತೆಲ್ ಇಕಾತ್ ಮನುನ್ ಗೆಲ್ಯಾನಿ: ತವ್ಡ್ಯಾಕ್ ಮಟ್ಲ್ಯಾರ್ ನ್ಹವ್ರೊ ಯೆಲೊ, ಅನಿ ತಯಾರ್ ಹೊತ್ತೆ ಸಗ್ಳೆ ಜಾನಾ ತೆಚ್ಯಾ ವಾಂಗ್ಡಾ ಲಗ್ನಾಚ್ಯಾ ಘರಾತ್ ಭುತ್ತುರ್ ಗುಸ್ಲೆ ಮಾನಾ ದಾರ್ ಧಾಪ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:10
21 ತಿಳಿವುಗಳ ಹೋಲಿಕೆ  

ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!


“ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.


ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


“ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.


ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು