Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:24 - ಪರಿಶುದ್ದ ಬೈಬಲ್‌

24 “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತರುವಾಯ ಒಂದೇ ತಲಾಂತು ಹೊಂದಿದವನು ಸಹ ಮುಂದೆಬಂದು - ಸ್ವಾಮೀ, ನೀನು ಕಠಿಣ ಮನುಷ್ಯನು, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಾನಾ ಎಕ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ, ಧನಿಯಾ, ತಿಯಾ ಲೈ ಕಟೊರ್ ಮಾನುಸ್ ಮನುನ್ ಮಾಕಾ ಗೊತ್ತ್ ಹಾಯ್. ಪೆರುನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:24
18 ತಿಳಿವುಗಳ ಹೋಲಿಕೆ  

ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


“ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ?


‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.


ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು.


ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.


“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?


ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು