Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:41 - ಪರಿಶುದ್ದ ಬೈಬಲ್‌

41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:41
33 ತಿಳಿವುಗಳ ಹೋಲಿಕೆ  

ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.


ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.


ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು.


ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.


ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು