Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:44 - ಪರಿಶುದ್ದ ಬೈಬಲ್‌

44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅದಕ್ಕೆ ಅವರು ಸಹ - ಸ್ವಾಮೀ, ಯಾವಾಗ ನೀನು ಹಸಿದದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ರೋಗದಲ್ಲಿ ಬಿದ್ದದ್ದನ್ನೂ ಸೆರೆಮನೆಯಲ್ಲಿದ್ದದ್ದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು? ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತನ್ನಾ ತೆನಿ, ಧನಿಯಾ, ಕನ್ನಾ ಅಮಿ ತುಕಾ ಭುಕೆನ್ ಹೊತ್ತೊ ನಾಹೊಲ್ಯಾರ್ ಸೊಸೆನ್ ಹೊತ್ತೊ. ಪರ್‌ದೆಶಿ ಹೊತ್ತೊ ನಾಹೊಲ್ಯಾರ್ ನಾಗ್ಡೊ ಹೊತ್ತೊ. ಶಿಕ್ ಹೊತ್ತೊ ನಾಹೊಲ್ಯಾರ್ ಬಂದಿಖಾನ್ಯಾತ್ ಹೊತ್ತೊ ಬಗಟ್ಲಾವ್. ಅನಿ ತುಕಾ ಮಜತ್ ಕರಿನಸ್ತಾನಾ ರ್‍ಹಾಲಾವ್? ಮನುನ್ ಜಬಾಬ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:44
14 ತಿಳಿವುಗಳ ಹೋಲಿಕೆ  

ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.


ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.


ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು