Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:9 - ಪರಿಶುದ್ದ ಬೈಬಲ್‌

9 “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಬುದ್ದ್ ಅಸಲ್ಲ್ಯಾ ಧೆಡ್ನಿಯಾನಿ, ನಾ ನಾ, ಅಮ್ಚೆಕ್ಡೆ ಹೊತ್ತೆ ತೆಲ್ ತುಮ್ಕಾ ದಿಲ್ಯಾರ್ ಅಮ್ಕಾಬಿ ಪಾವಿನಾ ಹೊಯ್ಲ್. ತುಮಿ ಇಕ್ತಲ್ಯಾಂಚ್ಯಾಕ್ಡೆ ಜಾವ್ನ್ ಇಕಾತ್ ಘೆಟಲ್ಲೆ ಬರೆ. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:9
12 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.


ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು