Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:11 - ಪರಿಶುದ್ದ ಬೈಬಲ್‌

11 ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ನಿಮ್ಮಲ್ಲಿ ಯಾವಾಗಲೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಗರಿಬ್ ಲೊಕಾ ಕನ್ನಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾತ್ಯಾತ್, ಖರೆ ಮಿಯಾ ತುಮ್ಚ್ಯಾ ವಾಂಗ್ಡಾ ಕನ್ನಾಬಿ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:11
16 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.


ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.


“ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು