Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:15 - ಪರಿಶುದ್ದ ಬೈಬಲ್‌

15 “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ, “ಮಿಯಾ ಜೆಜುಕ್ ಧರುನ್ ದಿಲ್ಯಾರ್ ತುಮಿ ಮಾಕಾ ಕಾಯ್ ದಿತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ತಿಸ್ ಚಾಂದಿಚೆ ಪೈಸೆ ಮೆಜುನ್ ತೆಕಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:15
17 ತಿಳಿವುಗಳ ಹೋಲಿಕೆ  

ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.


ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು.


ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.


ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.


ಅಂದಿನಿಂದ ಯೇಸುವನ್ನು ಹಿಡಿದುಕೊಡಲು ಯೂದನು ಸಮಯ ಕಾಯುತ್ತಿದ್ದನು.


ಇಪ್ಪತ್ತರಿಂದ ಅರವತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಮೂವತ್ತು ಶೆಕೆಲ್‌ಗಳಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು