Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:33 - ಪರಿಶುದ್ದ ಬೈಬಲ್‌

33 ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ ಪೇತ್ರನು, “ಎಲ್ಲರು ತಮ್ಮಲ್ಲಿ ವಿಶ್ವಾಸಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಎಂದಿಗೂ ಹಾಗೆ ಮಾಡುವುದಿಲ್ಲ,” ಎಂದು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪೇತ್ರನು ಆತನಿಗೆ - ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಎಂದಿಗೂ ಹಿಂಜರಿಯುವದಿಲ್ಲ ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಪೆದ್ರು ಜೆಜುಕ್, “ಸಗ್ಳೆ ಜಾನಾ ತುಕಾ ಸೊಡುನ್ ಗೆಲ್ಯಾರ್‍ಬಿ, ಮಿಯಾ ತರ್ ತುಕಾ ಸೊಡುನ್ ಜಾಯ್ನಾ.” ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:33
15 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.


ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.


ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.


ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಇಂದು ರಾತ್ರಿ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನ ವಿಷಯದಲ್ಲಿ ಆತನು ನನಗೆ ಗೊತ್ತೇ ಇಲ್ಲ ಎಂಬುದಾಗಿ ಮೂರು ಸಲ ಹೇಳುವೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು