Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:42 - ಪರಿಶುದ್ದ ಬೈಬಲ್‌

42 ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ಎಗ್ದಾ ಜೆಜು ಫಿಡೆ ಗೆಲೊ ಅನಿ, “ಮಾಜ್ಯಾ ಬಾಬಾ, ಹೆ ಕಸ್ಟಾಚೆ ಆಯ್ದಾನ್ ಮಿಯಾ ಫಿಲ್ಯಾ ಸಿವಾಯ್ ಧುರ್ ಕರುಕ್ ಹೊಯ್ನಾ ಮನುನ್ ರ್‍ಹಾಲ್ಯಾರ್, ತುಜ್ಯಾ ಮನಾ ಸರ್ಕೆಚ್ ಹೊಂವ್ದಿತ್.” ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:42
14 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ಮತ್ತೆ ನಿದ್ರೆ ಮಾಡುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು.


ಬಳಿಕ ಯೇಸು, “ಅಪ್ಪಾ, ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


“ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು