Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:45 - ಪರಿಶುದ್ದ ಬೈಬಲ್‌

45 ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ತೊ ಅಪ್ನಾಚ್ಯಾ ಶಿಸಾನಿಕ್ಡೆ ಪರ್ತುನ್ ಯೆಲೊ, ಅನಿ. “ಅಜುನ್‍ಬಿ ತುಮಿ ನಿಜುನ್ ಅರಾಮ್ ಕರುಕ್ ಲಾಗ್ಲ್ಯಾಶಿ? ಅಬಕಾ! ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಿತ್ ಒಪಸ್ತಲೊ ಎಳ್ ಯೆಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:45
14 ತಿಳಿವುಗಳ ಹೋಲಿಕೆ  

ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.


ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಆದ್ದರಿಂದ ಯೇಸು ಮತ್ತೊಮ್ಮೆ ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೂರನೆಯ ಸಾರಿ ಅದೇ ರೀತಿ ಪ್ರಾರ್ಥಿಸಿದನು.


ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.


ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.


ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು