Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:1 - ಪರಿಶುದ್ದ ಬೈಬಲ್‌

1 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಕ್ಕಾಳಿ ಫಿಡೆ ಸಗ್ಳ್ಯಾ ಮುಖ್ಯ ಯಾಜಕಾನಿ ಅನಿ ಜುದೆವ್ ಲೊಕಾಂಚ್ಯಾ ಜಾನ್ತ್ಯಾನಿ ಮಿಳುನ್ ಜೆಜುಕ್ ಕಶೆ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:1
16 ತಿಳಿವುಗಳ ಹೋಲಿಕೆ  

ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.


ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.


ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ.


ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು