Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:25 - ಪರಿಶುದ್ದ ಬೈಬಲ್‌

25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಸಗ್ಳ್ಯಾ ಲೊಕಾನಿ,“ಹೆಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವರ್‍ತಿ ಅನಿ ಅಮ್ಚ್ಯಾ ಪೊರಾಂಚ್ಯಾ ವರ್‍ತಿ ಪಡುಂದಿತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:25
20 ತಿಳಿವುಗಳ ಹೋಲಿಕೆ  

ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.”


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು