Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:32 - ಪರಿಶುದ್ದ ಬೈಬಲ್‌

32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆನಿ ಶಾರಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ ಸಿರೆನ್ ಮನ್ತಲ್ಯಾ ಶಾರಾಚೊ ಸಿಮಾವ್ ಮನ್ತಲೊ ಎಕ್ ಮಾನುಸ್ ತೆಂಕಾ ಗಾವ್ಲೊ. ಸೈನಿಕಾನಿ ತೆಕಾ ‍ಜಬರ್‍ದಸ್ತಿನಿ ಜೆಜುಚೊ ಕುರಿಸ್ ವಾವುನ್ ನ್ಹೆವ್ಕ್ ಲಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:32
17 ತಿಳಿವುಗಳ ಹೋಲಿಕೆ  

ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.


ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.


ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.


ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,


ಯಾವ ಸೈನಿಕನಾದರೂ ತನ್ನೊಂದಿಗೆ ಒಂದು ಮೈಲಿ ದೂರ ಬರಬೇಕೆಂದು ನಿಮ್ಮನ್ನು ಒತ್ತಾಯಿಸಿದರೆ, ಅವನೊಂದಿಗೆ ಎರಡು ಮೈಲಿ ದೂರ ಹೋಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು