Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:43 - ಪರಿಶುದ್ದ ಬೈಬಲ್‌

43 ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೊ ದೆವಾ ವರ್‍ತಿ ಹೊಂದುನ್ ರ್‍ಹಾತಾ ಅನಿ ಅಪ್ನಿಚ್ ದೆವಾಚೊ ಲೆಕ್ ಮನುನ್ ಘೆತಾ. ತಸೆಹೊಲ್ಯಾರ್ ದೆವ್ ಯೆವ್ನ್ ತೆಕಾ ಅತ್ತಾ ಹುರ್‍ವುತಾ ಕಾಯ್ ಮನುನ್ ಅಮಿಬಿ ಬಗ್ತಾವ್‍!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:43
17 ತಿಳಿವುಗಳ ಹೋಲಿಕೆ  

“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎಂದು ಹೇಳುತ್ತಾರೆ.


ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.


“ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.


“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!


“ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.


“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.


ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.


ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


“ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು