Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:5 - ಪರಿಶುದ್ದ ಬೈಬಲ್‌

5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:5
12 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.


ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.


ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


“ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು.


ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು