Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:51 - ಪರಿಶುದ್ದ ಬೈಬಲ್‌

51 ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ದೆವಾಚ್ಯಾ ಗುಡಿತ್ ಭಾಂದಲ್ಲೊ ಫಡ್ದೊ ವೈನಾ ಖಾಯ್ಲ್ ಪತರ್ ಪಿಂಜುನ್ ದೊನ್ ಭಾಗ್ ಹೊಲೊ. ಸಗ್ಳಿ ಜಿಮಿನ್ ಹಾಲ್ಲಿ ಅನಿ ಮೊಟ್ಯಾ-ಮೊಟ್ಯಾ ಗುಂಡ್ಯಾಕ್ನಿ ಬಿರ್‍ಕಾ ಪಡ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:51
26 ತಿಳಿವುಗಳ ಹೋಲಿಕೆ  

ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು.


ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.


ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.


ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು.


ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು