Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:52 - ಪರಿಶುದ್ದ ಬೈಬಲ್‌

52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಸಾರಿಯಾ ಫುಟುನ್ ಉಗಡ್ಲ್ಯಾ, ಅನಿ ಸುಮಾರ್ ಮರಲ್ಲಿ ದೆವಾಚಿ ಲೊಕಾ ಝಿತ್ತಿ ಹೊವ್ನ್ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:52
13 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಆದಕಾರಣವೇ, ನಿಮ್ಮ ಸಭೆಯಲ್ಲಿರುವ ಅನೇಕರು ರೋಗಿಗಳೂ ಬಲಹೀನರೂ ಆಗಿದ್ದಾರೆ ಮತ್ತು ಅನೇಕರು ಸತ್ತು ಹೋದರು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು