Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:6 - ಪರಿಶುದ್ದ ಬೈಬಲ್‌

6 ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರೇ ಹೇಳಿದಂತೆ ಪುನರುತ್ಥಾನ ಹೊಂದಿದ್ದಾರೆ. ಬನ್ನಿ, ಅವರನ್ನಿಟ್ಟಿದ್ದ ಸ್ಥಳವನ್ನು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ಹಿತ್ತೆ ನಾ, ತೊ ಅಪ್ನಿ ಸಾಂಗಲ್ಲ್ಯಾ ಸರ್ಕೆ ಮರಲ್ಲೊ ಝಿತ್ತೊ ಹೊವ್ನ್ ಉಟ್ಲಾ. ಹಿತ್ತೆ ಯೆವ್ನ್ ತೆಚೆ ಮಡೆ ಥವಲ್ಲೊ ಜಾಗೊ ಬಗಾ ಯೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:6
17 ತಿಳಿವುಗಳ ಹೋಲಿಕೆ  

ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.


ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.


ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ.


ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು