Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:4 - ಪರಿಶುದ್ದ ಬೈಬಲ್‌

4 ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುವಾಂವಾಕ್ ಒಂಟೆಚ್ಯಾ ಕೆಸಾನಿ ಕರಲ್ಲೆ ಕಪ್ಡೆ ನೆಸಲ್ಲ್ಯಾನ್, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಭಾಂದಲ್ಲ್ಯಾನ್, ಟುಪ್ಪುನ್ಯಾ ಅನಿ ಡಂಗ್ಳಿತ್ಲೆ ಮ್ಹಾವ್ ಖಾವ್ನ್ ತೊ ಜಿವನ್ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:4
12 ತಿಳಿವುಗಳ ಹೋಲಿಕೆ  

ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.


ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.


ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು.


ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.


ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು