ಮತ್ತಾಯ 4:24 - ಪರಿಶುದ್ದ ಬೈಬಲ್24 ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |
ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.