Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:11 - ಪರಿಶುದ್ದ ಬೈಬಲ್‌

11 “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ತುಮಿ ಮಾಜೆ ವಾಂಗ್ಡಿ ಮನುನ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ಬುರ್ಶ್ಯಾ-ಬುರ್ಶ್ಯಾ ಝುಟ್ಯಾ ಗೊಸ್ಟಿಯಾ ತುಮ್ಚ್ಯಾ ವಿರೊದ್ ಬೊಲ್ಲ್ಯಾರ್, ತುಮ್ಚಿ ಮರ್‍ಯಾದ್ ಕಾಡ್ಲ್ಯಾರ್, ತುಮಿ ಕವ್ಡೆ ಸುಖಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:11
32 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.


ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.


“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.


ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.


ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.


ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗೋಸ್ಕರ ತನ್ನ ಜೀವವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.


ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,


ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ.


ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


“ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು