Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:20 - ಪರಿಶುದ್ದ ಬೈಬಲ್‌

20 ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ದೆವಾಕ್ ಕಾಯ್ ಪಾಜೆ ತೆ ಖಾಯ್ದೆ ಶಿಕ್ವುತಲ್ಯಾಂಚ್ಯಾ ಅನಿ ಫಾರಿಜೆವಾಂವಾಚ್ಯಾನ್ಕಿ ಬರೆ ತುಮಿ ಕರ್ಲ್ಯಾ ಸಿವಾಯ್ ಸರ್ಗಾಚ್ಯಾ ರಾಜಾತ್ ತುಮ್ಕಾ ಗುಸುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:20
24 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.


ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”


ಶ್ರೀಮಂತರು ದೇವರ ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


“ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.


ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು