Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:22 - ಪರಿಶುದ್ದ ಬೈಬಲ್‌

22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:22
93 ತಿಳಿವುಗಳ ಹೋಲಿಕೆ  

“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳುವವನು ತನ್ನ ಸಹೋದರನನ್ನು ದ್ವೇಷಿಸುತ್ತಿದ್ದರೆ, ಅವನಿನ್ನೂ ಅಂಧಕಾರದಲ್ಲಿದ್ದಾನೆ.


ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.


ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.


ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.


ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.


ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.


ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು.


ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.


ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,


ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!


ಸೈನಿಕರು ಅಪೊಸ್ತಲರನ್ನು ಸಭೆಗೆ ಕರೆದುಕೊಂಡು ಬಂದು ಯೆಹೂದ್ಯನಾಯಕರ ಮುಂದೆ ನಿಲ್ಲಿಸಿದರು. ಪ್ರಧಾನಯಾಜಕನು ಅಪೊಸ್ತಲರಿಗೆ,


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.


ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.


ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.


ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!


ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.


ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕ ಮಾಡಿದನು.


ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,


ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ,


ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು