Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:23 - ಪರಿಶುದ್ದ ಬೈಬಲ್‌

23 “ಆದ್ದರಿಂದ ನೀವು ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಮುಂದೆ ದೇವರಿಗೆ ಅರ್ಪಿಸುವಾಗ, ನಿಮ್ಮ ಸಹೋದರನಿಗೆ ನಿಮ್ಮ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿಮ್ಮ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವದೆ ಎಂಬದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಚೆಸಾಟ್ನಿ ತಿಯಾ ದೆವಾಕ್ ಕಾನಿಕ್ ದಿವ್ಕ್ ಮನುನ್ ಅಲ್ತಾರಿಕ್ಡೆ ಗೆಲ್ಲ್ಯಾ ತನ್ನಾ ತುಜ್ಯಾ ಭಾವಾಚ್ಯಾ ವಿರೊದ್ ಕಾಯ್ತರ್ ಹಾಯ್ ಮನುನ್ ತುಕಾ ಯಾದ್ ಯೆಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:23
17 ತಿಳಿವುಗಳ ಹೋಲಿಕೆ  

ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.


ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ.


ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು