ಮತ್ತಾಯ 5:3 - ಪರಿಶುದ್ದ ಬೈಬಲ್3 “ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 “ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್ಗಾಚೆ ರಾಜ್ ತೆಂಚೆಚ್! ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.