Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:46 - ಪರಿಶುದ್ದ ಬೈಬಲ್‌

46 ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:46
19 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.


ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.


ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು.


ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.


ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.


ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.


ಸುಂಕವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.


ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.


ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು