Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:7 - ಪರಿಶುದ್ದ ಬೈಬಲ್‌

7 ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದುಸ್ರ್ಯಾಂಚ್ಯಾ ವರ್‍ತಿ ದಯಾ ದಾಕ್ವುತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಚಿ ದಯಾ ಕರ್‍ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:7
37 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ.


ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


“ಆಗ ನೀವು ನಿಮ್ಮ ಸಹೋದರರಿಗೆ, ‘ನೀವು ನನ್ನ ಜನರು’ ಎಂದು ಹೇಳುವಿರಿ. ಮತ್ತು ನಿಮ್ಮ ಸಹೋದರಿಯರಿಗೆ, ‘ಆತನು ನಿಮ್ಮ ಮೇಲೆ ಕರುಣೆ ಇಟ್ಟಿರುತ್ತಾನೆ’ ಎಂದು ಹೇಳುವಿರಿ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.


ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.


ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.


ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.


ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು