Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:9 - ಪರಿಶುದ್ದ ಬೈಬಲ್‌

9 ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:9
31 ತಿಳಿವುಗಳ ಹೋಲಿಕೆ  

ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.


ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.


ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?


ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


“ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರಪರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು.


ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!


ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.


ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು