Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:13 - ಪರಿಶುದ್ದ ಬೈಬಲ್‌

13 ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಲೈ ಕಟಿನ್ ಪರಿಕ್ಷಾತ್ ಅಮ್ಕಾ ಘಾಲುನಕೊ, ಸೈತಾನಾಕ್ನಾ ಅಮ್ಕಾ ರಾಕ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:13
57 ತಿಳಿವುಗಳ ಹೋಲಿಕೆ  

ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.


ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.


ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.


ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


“ಯೆಹೋವನು ಎಂದೆಂದಿಗೂ ಆಳುವನು!”


ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಲಿ.


ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!


ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!


ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.


ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು