ಮತ್ತಾಯ 6:19 - ಪರಿಶುದ್ದ ಬೈಬಲ್19 “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 “ಹಿತ್ತೆ ಹ್ಯಾ ಜಗಾತ್ ತುಮ್ಚೆಸಾಟ್ನಿ ಬದಿಕ್ ಗೊಳಾ ಕರುನ್ ಥವ್ನಕಾಶಿ, ಹಿತ್ತೆ ತೆಕಾ ವಾಳ್ಟಿ ಲಾಗ್ತಾ ಅನಿ ಜಂಗ್ಲಾಗುನ್ ಹಾಳ್ ಹೊವ್ನ್ ಜಾತಾ, ಅನಿ ಚೊರಾ ಘರಾ ಫೊಡುನ್ ಕಾಡುನ್ ಚೊರುನ್ ಘೆವ್ನ್ ಜಾತ್ಯಾತ್. ಅಧ್ಯಾಯವನ್ನು ನೋಡಿ |
ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.