Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:28 - ಪರಿಶುದ್ದ ಬೈಬಲ್‌

28 “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಅನಿ ಕಪ್ಡ್ಯಾಂಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ? ಬಗಾ ತಿ ಶೆತಾತ್ಲಿ ಫುಲ್ಲಾ ತಿ ಕಸೆ ಉಗಾವ್ತ್ಯಾತ್; ತಿ ಕಾಮ್ ಕರಿನ್ಯಾತ್, ನಾ ಅಪ್ನಾಸಾಟ್ನಿ ಕಪ್ಡೆ ತಯಾರ್ ಕರಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:28
13 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


“ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


“‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.


ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.


ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.


ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.


ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.


ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು