Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:30 - ಪರಿಶುದ್ದ ಬೈಬಲ್‌

30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:30
15 ತಿಳಿವುಗಳ ಹೋಲಿಕೆ  

ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.


ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು