Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:31 - ಪರಿಶುದ್ದ ಬೈಬಲ್‌

31 “‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ತೆಚೆಸಾಟ್ನಿ ಅಮಿ ಕಾಯ್ ಖಾತಲೆ? ಕಾಯ್ ಫಿತಲೆ? ಕಾಯ್ ನೆಸ್ತಲೆ? ಮನುನ್ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:31
16 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


“ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ.


ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.


ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು