Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:5 - ಪರಿಶುದ್ದ ಬೈಬಲ್‌

5 “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ತುಮಿ ಮಾಗ್ನಿ ಕರ್‍ತಾನಾ, ಕುಸ್ಡ್ಯಾ ಲೊಕಾಂಚ್ಯಾ ಸರ್ಕೆ ಕರುನಕಾಸಿ! ಸಗ್ಳ್ಯಾ ಲೊಕಾನಿ ಬಗಿ ಸರ್ಕೆ ಸಿನಾಗೊಗಾತ್ನಿ, ಅನಿ ವನಿಯಾತ್ನಿ ಇಬೆ ರ್‍ಹವ್ನ್ ಮಾಗ್ನಿ ಕರುಕ್ ತೆಂಕಾ ಲೈ ಕುಶಿ. ಮಿಯಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಅದ್ದಿಚ್ ಗಾವುನ್ ಹೊಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:5
34 ತಿಳಿವುಗಳ ಹೋಲಿಕೆ  

“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.


ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ.


ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.


ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!


ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು.


ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.


ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ.


ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


“ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು