Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:12 - ಪರಿಶುದ್ದ ಬೈಬಲ್‌

12 “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ, ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ; ಮೊಯ್ಜೆನ್ ದಿಲ್ಲ್ಯಾ ಖಾಯ್ದ್ಯಾಂಚೊ ಅನಿ ಪ್ರವಾದ್ಯಾನಿ ಶಿಕ್ವಲ್ಲ್ಯಾಚೊ ಅರ್ತ್‍ ಹ್ಯೊಚ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:12
19 ತಿಳಿವುಗಳ ಹೋಲಿಕೆ  

ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬದುಕುವನು.


“ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು