Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:13 - ಪರಿಶುದ್ದ ಬೈಬಲ್‌

13 “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಜಾಂವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಜಾತಲೆ ದಾರ್ ಲೈ ರುಂದ್ ಥೈ ಜಾತಲೊ ರಸ್ತೊಬಿ ಲೈ ಸಸಾರಾಚೊ, ಅನಿ ಲೈ ಜಾನಾ ತ್ಯಾ ರಸ್ತ್ಯಾನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:13
38 ತಿಳಿವುಗಳ ಹೋಲಿಕೆ  

ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.


“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)


ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು