Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:14 - ಪರಿಶುದ್ದ ಬೈಬಲ್‌

14 ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ದಾರ್ ಲೈ ಬಾರಿಕ್, ಅನಿ ತಿ ವಾಟ್ ಲೈ ತರಾಸಾಚಿ, ಅನಿ ಖಾಲಿ ಉಲ್ಲ್ಯಾಸ್ಯಾಚ್ ಲೊಕಾಕ್ನಿ ತಿ ವಾಟ್ ಗಾವ್ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:14
27 ತಿಳಿವುಗಳ ಹೋಲಿಕೆ  

“ಹೌದು, ಆಹ್ವಾನಿಸಲ್ಪಟ್ಟವರು ಅನೇಕರಾದರೂ ಆರಿಸಲ್ಪಟ್ಟವರು ಕೆಲವರು ಮಾತ್ರ.”


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


“ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.


ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು