Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:26 - ಪರಿಶುದ್ದ ಬೈಬಲ್‌

26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ಖರೆ ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚೆ ಸರ್ಕೆ ಚಲಿನಾ ತೊ ರೆತಿ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಪಿಶ್ಯಾ ಮಾನ್ಸಾ ಸರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:26
9 ತಿಳಿವುಗಳ ಹೋಲಿಕೆ  

“ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು