Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:28 - ಪರಿಶುದ್ದ ಬೈಬಲ್‌

28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:28
18 ತಿಳಿವುಗಳ ಹೋಲಿಕೆ  

ಯೇಸುವಿನ ಉಪದೇಶಕ್ಕೆ ಅವರು ಅತ್ಯಾಶ್ಚರ್ಯಪಟ್ಟರು. ಏಕೆಂದರೆ ಆತನು ಅಧಿಕಾರದಿಂದ ಮಾತಾಡಿದನು.


ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.


ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು.


ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?


ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.


ಜನರೆಲ್ಲರೂ ಇದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.


ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.


ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ಯೇಸು ಈ ಸಂಗತಿಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ, ತನ್ನ ಶಿಷ್ಯರಿಗೆ,


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.


ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.


ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು