Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:12 - ಪರಿಶುದ್ದ ಬೈಬಲ್‌

12 ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ದೆವಾಚ್ಯಾ ರಾಜಾತ್ ರ್‍ಹಾವ್ಕ್ ಮನುನ್ ಹೊತ್ತ್ಯಾಕ್ನಿ ಭಾಯ್ರ್ ಘಾಲುನ್ ಕಾಳ್ಕಾತ್ ಟಾಕುನ್ ಹೊತಾ, ಥೈ ತೆನಿ ಬೊಬ್ ಮಾರ್‍ತ್ಯಾತ್ ಅನಿ ಕಟ್‍ಕಟ್‍ ದಾತಾ ಚಾವ್ತ್ಯಾತ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:12
19 ತಿಳಿವುಗಳ ಹೋಲಿಕೆ  

ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.


ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”


ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.


ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.


ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು