Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:26 - ಪರಿಶುದ್ದ ಬೈಬಲ್‌

26 ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ ತೆಂಕಾ, “ತುಮಿ ಎವ್ಡೆ ಲೈ ಕಶ್ಯಾಕ್ ಭಿಂವ್ಲ್ಯಾಶಿ? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!” ಮಟ್ಲ್ಯಾನ್. ತನ್ನಾ ತೊ ಉಟುನ್ ಇಬೆ ರ್‍ಹಾಲೊ ಅನಿ ವಾರ್ಯಾಕ್ ಅನಿ ಲ್ಹಾಟಾಕ್ನಿ ಗಪ್ ರ್‍ಹಾವಾ ಮನುನ್ ಸಾಂಗ್ಲ್ಯಾನ್, ತನ್ನಾ ಸಗ್ಳೆ ಎಗ್ದಮ್ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:26
24 ತಿಳಿವುಗಳ ಹೋಲಿಕೆ  

ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.


ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,


ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು,


ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು