Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:34 - ಪರಿಶುದ್ದ ಬೈಬಲ್‌

34 ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಶಾರಾತ್ಲೆ ಸಗ್ಳೆ ಜಾನಾ ಜೆಜುಕ್ಡೆ ಯೆಲ್ಯಾನಿ. ಅನಿ ತೆಕಾ ಭೆಟುನ್ ತೆನಿ ತೆಂಚೆ ಪ್ರಾಂತ್ಯ್ ಸೊಡುನ್ ಜಾವ್ಚೆ ಮನುನ್ ತೆಚ್ಯಾಕ್ಡೆ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:34
13 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.


ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು