Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:6 - ಪರಿಶುದ್ದ ಬೈಬಲ್‌

6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಧನಿಯಾ, ಮಾಜೊ ಆಳ್ ವಾರ್‍ಯಾನ್‍ ಮಾರುನ್ ಹಾತ್ರಾನಾತ್ ಪಡ್ಲಾ, ತೊ ಲೈ ತರಾಸ್ ಕರುನ್ ಘೆವ್ಲಾ”. ಮನುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:6
12 ತಿಳಿವುಗಳ ಹೋಲಿಕೆ  

ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.


ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.


ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.


ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.


ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು