Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:23 - ಪರಿಶುದ್ದ ಬೈಬಲ್‌

23 ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೇಲೆ ಯೇಸು ಆ ಅಧಿಕಾರಿಯ ಮನೆಗೆ ಬಂದು ವಾದ್ಯಗಾರರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಜೆಜು ಅದಿಕಾರ್‍ಯಾಚ್ಯಾ ಘರಾತ್ ಗೆಲೊ, ಅನಿ ಮರ್‍ನಾಚ್ಯಾ ಎಳಾರ್ ವಾಜ್ಪಾ ವಾಜ್ವುತಲೆ, ಅನಿ ಧಾಂದಲ್ ಕರ್‍ತಲ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:23
12 ತಿಳಿವುಗಳ ಹೋಲಿಕೆ  

ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು, ‘ನಾವು ನಿಮಗೋಸ್ಕರ ವಾದ್ಯಬಾರಿಸಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ದುಃಖದ ಹಾಡನ್ನು ಹಾಡಿದೆವು, ಆದರೆ ನೀವು ಅಳಲಿಲ್ಲ’ ಎಂದು ಹೇಳುತ್ತಾರೆ.


‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು. ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ದುಃಖಿಸಲಿಲ್ಲ.’


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಪೌಲನು ಕೆಳಗಿಳಿದು ಅವನ ಬಳಿಗೆ ಹೋಗಿ, ಮೊಣಕಾಲೂರಿ ಅವನನ್ನು ಅಪ್ಪಿಕೊಂಡು, ಅಲ್ಲಿದ್ದ ವಿಶ್ವಾಸಿಗಳಿಗೆ, “ಚಿಂತಿಸಬೇಡಿ. ಇವನು ಮತ್ತೆ ಜೀವಂತನಾದನು” ಎಂದು ಹೇಳಿದನು.


ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು