Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:27 - ಪರಿಶುದ್ದ ಬೈಬಲ್‌

27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ದೊಗೆ ಜಾನಾ ಕುಡ್ಡೆ ಜೆಜುಚ್ಯಾ ಫಾಟ್ನಾ ಯೆವ್ನಗೆತ್ “ಜೆಜು, ದಾವಿದಾಚ್ಯಾ ಲೆಕಾ ಅಮ್ಚಿ ದಯಾ ಕರ್” ಮನುನ್ ಬೊಬ್ ಮಾರುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:27
24 ತಿಳಿವುಗಳ ಹೋಲಿಕೆ  

ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


“ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.


ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


“ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.


ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ?


ಆದರೆ ಅವರು, “ಯೇಸುವೇ! ಗುರುವೇ! ದಯಮಾಡಿ ನಮಗೆ ಸಹಾಯಮಾಡು!” ಎಂದು ಕೂಗಿಕೊಂಡರು.


ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.


ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.


ಯೇಸು ಮತ್ತು ಆತನ ಶಿಷ್ಯರು ಜೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಬಹಳ ಜನರು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು