Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:30 - ಪರಿಶುದ್ದ ಬೈಬಲ್‌

30 ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಅವರಿಗೆ ಕಣ್ಣು ಬಂದವು. ಮತ್ತು ಯೇಸು ಅವರಿಗೆ - ಇದು ಯಾರಿಗೂ ತಿಳಿಯಬಾರದು ನೋಡಿರಿ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತಾಬೊಡ್ತೊಬ್ ತೆಂಚ್ಯಾ ಡೊಳ್ಯಾಕ್ನಿ ದಿಸ್ಟ್ ಯೆಲಿ. ತನ್ನಾ ಜೆಜುನ್ ತೆಂಕಾ, “ಹೆ ಕೊನಾಕ್ಬಿ ಸಾಂಗುನಕಾಸಿ!” ಮನುನ್ ತಾಕಿತ್ ದಿವ್ನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:30
13 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಬಾಲಕಿಯ ತಂದೆತಾಯಿಗಳು ಬೆರಗಾದರು. ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದನು.


ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.


ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ಯೇಸು ಅವನಿಗೆ, “ನಾನು ನಿನ್ನನ್ನು ಗುಣಪಡಿಸಿದೆನೆಂದು ಯಾರಿಗೂ ಹೇಳದೆ, ನೇರವಾಗಿ ಯಾಜಕನ ಬಳಿಗೆ ಹೋಗಿ ಮೈ ತೋರಿಸು. ನೀನು ಗುಣಹೊಂದಿರುವುದರಿಂದ ಮೋಶೆಯ ಆಜ್ಞಾನುಸಾರವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸು. ನಿನಗೆ ಗುಣವಾಯಿತು ಎಂಬುದಕ್ಕೆ ಇದು ಜನರಿಗೆ ಸಾಕ್ಷಿಯಾಗಿರುವುದು” ಎಂದು ಎಚ್ಚರಿಕೆ ನೀಡಿ ಕಳುಹಿಸಿಬಿಟ್ಟನು.


ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು